ದೇಶದ ಪ್ರತಿ ಜಿಲ್ಲೆಯಲ್ಲಿ ೭೫ ಅಮೃತ ಸರೋವರಗಳನ್ನು ರಚಿಸುವ ಕೇಂದ್ರ ಸರ್ಕಾರದ ಉಪಕ್ರಮದ ಭಾಗವಾಗಿ ಕೇಂದ್ರ ರಾಜ್ಯ ಖಾತೆಯ ಸಚಿವ ಶ್ರೀ ರಾಜೀವ್ ಚಂದ್ರಶೇಖರ್ ಅವರು ಬೆಂಗಳೂರಿನ ಮೂರು ಕೆರೆಗಳಿಗೆ ಭೇಟಿ ನೀಡಿದರು. ನಮ್ಮ ಬೆಂಗಳೂರು ಪ್ರತಿಷ್ಠಾನವು ಈ ಹಿಂದೆ ವ್ಯಾಪಕವಾಗಿ ಕಾಮಗಾರಿ ಕೈಗೊಂಡಿರುವ ಕೆಂಪಾಂಬುಧಿ, ಗುಬ್ಬಲಾಳ ಮತ್ತು ಮೇಸ್ತ್ರಿಪಾಳ್ಯ ಕೆರೆಗಳಿಗೆ ಭೇಟಿ ನೀಡಿದ ಅವರು, ಈ ಕೆರೆಗಳ ಪುನಶ್ಚೇತನ ಮತ್ತು ಸಂರಕ್ಷಣೆಗೆ ಕ್ರಿಯಾ ಯೋಜನೆ ಸಲ್ಲಿಸುವಂತೆ ಬಿಬಿಎಂಪಿಗೆ ತಿಳಿಸಿದರು....